ತಲೆನೋವಿಗೆ ಬಳಸುವ ಕನ್ನಡಕ ಕೊಡಿಸಿಲ್ಲವೆಂದು ಬಾಲಕ ಆತ್ಮಹತ್ಯೆ

ತಲೆನೋವಿನಿಂದ ಬಳಲುತ್ತಿದ್ದ ಬಾಲಕ, ಕನ್ನಡಕ ತೆಗೆದುಕೊಡಲಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಧುರೈ/ಸೇಲಂ: ತಲೆನೋವಿನಿಂದ ಬಳಲುತ್ತಿದ್ದ ಬಾಲಕ, ಕನ್ನಡಕ ತೆಗೆದುಕೊಡಲಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಪೆರುಂಗುಡಿಯ ಮರುತುಪಂಡಿ ನಗರದಲ್ಲಿ ನಡೆದಿದೆ.
14 ವರ್ಷದ ಎಸ್ ಪೋನ್ ರಾಜ್ ಆತ್ಮಹತ್ಯೆಗೆ ಶರಣಾದ ಬಾಲಕ. ಈತನ ತಂದೆ ಸಮೋಸ ವ್ಯಾಪಾರಿ. ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಮಗನನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ, ವೈದ್ಯರು ಕನ್ನಡಕ ಧರಿಸಲು ಹೇಳಿದ್ದಾರೆ. 
ಆದರೆ, ಕನ್ನಡಕ ಖರೀದಿಸಲು ಬೇಕಾದಷ್ಟು ಹಣ ತಂದೆ ಬಳಿ ಇರಲಿಲ್ಲವಾದ್ದರಿಂದ ಸುಮ್ಮನಾಗಿದ್ದಾರೆ. ಇದರಿಂದ ನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com