ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಹೈದರಾಬಾದ್ ಗೆ ಭೇಟಿ ನೀಡಿರುವ ಕನ್ಹಯ್ಯ ಕುಮಾರ್, ಸಂಜೆ ವಿವಿಗೆ ತೆರಳಿದ್ದರು. ಆದರೆ ಪೊಲೀಸರು ಕನ್ಹಯ್ಯ ಕುಮಾರ್ ಅವರನ್ನು ವಿವಿಯ ಗೇಟ್ ಬಳಿ ತಡೆದಿದ್ದಾರೆ. ಈ ವೇಳೆ ಪೊಲೀಸರ ಹಾಗೂ ಕನ್ಹಯ್ಯ ಕುಮಾರ್ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ರೋಹಿತ್ ವೇಮುಲಾ ತಾಯಿ ಸಹ ಇದ್ದರು.