ನವದೆಹಲಿ: ಬೆಲ್ಜಿಯಂನ ಬ್ರುಸೆಲ್ಸ್ ನಗರದಲ್ಲಿನ ಉಗ್ರದಾಳಿಯ ವೇಳೆ ನಾಪತ್ತೆಯಾಗಿದ್ದ ಭಾರತೀಯನ ಫೋನ್ ಕರೆಗಳನ್ನು ಟ್ರ್ಯಾಕ್ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಬ್ರುಸೆಲ್ಸ್ನ ಒಂದು ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ರಾಘವೇಂದ್ರನ್ ಗಣೇಶ್ ಕೊನೆಯ ಬಾರಿ ಫೋನ್ ಮಾಡಿದ್ದರು ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.