ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ

ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಕಾಕದ್ವೀಪ್‌ : ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ ನಾಯಕರೊಬ್ಬರ ಮೇಲೆ ಕಚ್ಚಾ ಬಾಂಬ್‌ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನವೇ ನಡೆದಿರುವ ಈ ಕಗ್ಗೊಲೆ ಈ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿದೆ.

ಟಿಎಂಸಿ ನಾಯಕ ಹಾಜಿ ಅಬ್ದುಲ್‌ ಜಹೇಲ್‌ ಮುಲ್ಲಾ (75), ಸ್ಥಳೀಯ ಟಿಎಂಸಿ ಅಭ್ಯರ್ಥಿ ಮಂತುರಾಮ್‌ ಪಕೀರಾ ಅವರ ಪರ ಚುನಾವಣಾ ಪ್ರಚಾರಾಭಿಯಾನದ ಸಭೆ ಮುಗಿಸಿ ರಾತ್ರಿ 11.30ರ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಅಬ್ದುಲ್‌ ಜಹೇಲ್‌ ಅವರನ್ನು ಅಪರಿಚಿತ ಹಂತಕರು ಕಚ್ಚಾ ಬಾಂಬ್ ಸಿಡಿಸಿ ಕೊಂದಿದ್ದಾರೆ. ದಾಳಿಯ ತೀವ್ರತೆಯಿಂದ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಕೃತ್ಯ ನಡೆಯುತ್ತಿದ್ದಂತೆಯೇ ಜನರು ಸ್ಥಳದಲ್ಲಿ ಜಮಾಯಿಸಿತೊಡಗಿದಾಗ ಹಂತಕರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಬೆದರಿಸುತ್ತಾ ತಮ್ಮ ವಾಹನದಲ್ಲಿ ಪರಾರಿಯಾಗಿದ್ದಾರೆ.

ಈ ಕೊಲೆ ಕೃತ್ಯದ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿರಬಹುದೆಂದು ಟಿಎಂಸಿ ಆರೋಪಿಸಿದೆ. ಆದರೆ ಪಕ್ಷದೊಳಗಿನ ಬಣಗಳ ಜಗಳದಿಂದಾಗಿ ಅಬ್ದುಲ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಿಪಿಎಂ ಹೇಳಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com