ವಿಶ್ವವಿದ್ಯಾನಿಲಯಗಳ ಮೇಲೆ ಆಕ್ರಮಣ ನಡೆಸಲಾಗುತ್ತಿದೆ: ಕನ್ಹಯ್ಯ ಕುಮಾರ್

ವಿಶ್ವವಿದ್ಯಾನಿಲಯಗಳನ್ನು ಗಂಭೀರ ಚಿಂತನೆಗಳನ್ನು ಉತ್ತೇಜಿಸುವ ಕೇಂದ್ರಗಳೆಂದು ಹೇಳಿರುವ ಜೆಎನ್ ಯು ವಿವಿ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್...
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್
Updated on

ಹೈದರಾಬಾದ್: ವಿಶ್ವವಿದ್ಯಾನಿಲಯಗಳನ್ನು  ಗಂಭೀರ ಚಿಂತನೆಗಳನ್ನು ಉತ್ತೇಜಿಸುವ ಕೇಂದ್ರಗಳೆಂದು ಹೇಳಿರುವ ಜೆಎನ್ ಯು ವಿವಿ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್, ವಿಶ್ವವಿದ್ಯಾನಿಲಯಗಳು ಆಕ್ರಮಣಕ್ಕೆ ಗುರಿಯಾಗುತ್ತಿವೆ ಎಂದು ಆರೋಪಿಸಿದ್ದಾನೆ.

ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿರುವ  ಕನ್ಹಯ್ಯ ಕುಮಾರ್" ನಾವು ರಾಜಕೀಯ ಮಾಡುತ್ತಿದ್ದೇವೆಂಬ ಆರೋಪ ಕೇಳಿಬಂದಿದೆ. ರಾಜಕೀಯ ಮಾಡುತ್ತಿರುವುದು ನಾವೋ ಅಥವಾ ಸರ್ಕಾರವೋ ಎಂದು ಕನ್ಹಯ್ಯ ಕುಮಾರ್ ಪ್ರಶ್ನಿಸಿದ್ದು, ವಿಶ್ವವಿದ್ಯಾನಿಲಯಗಳ ಸ್ವಾಯತ್ತತೆಯನ್ನು ನಾಶ ಮಾಡಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಹೇಳಿದ್ದಾನೆ.

ಬುದ್ಧಿಜೀವಿಗಳ ಹಾಗೂ ವಿಶ್ವವಿದ್ಯಾನಿಲಯಗಳ ಕೆಲಸ ಗಂಭೀರ ಚಿಂತನೆಯನ್ನು ಉತ್ತೇಜಿಸುವುದು, ಹೈದರಾಬಾದ್ ವಿಶ್ವವಿದ್ಯಾನಿಲಯ ಹಾಗೂ ಜೆಎನ್ ಯು ನಡುವೆ ಸಾಮ್ಯತೆ ಇದೆ ಎರಡೂ ವಿವಿಗಳನ್ನು ದಾಳಿಗೆ ಗುರಿಮಾಡಲಾಗುತ್ತಿದೆ ಎಂದು ಕನ್ಹಯ್ಯ ಕುಮಾರ್ ಆರೋಪಿಸಿದ್ದಾನೆ. ಭಾಷಣದ ವೇಳೆ ವ್ಯಕ್ತಿಯೊಬ್ಬ ಕನ್ಹಯ್ಯ ಕುಮಾರ್ ಮೇಲೆ ಶೂ ಎಸೆದಿರುವ ಘಟನೆಯು ವರದಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com