ಹೊಸ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿ ಸಾಧ್ಯತೆ: ಅಶೋಕ್ ಗಜಪತಿ ರಾಜು

ಹೊಸ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ...
ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು
ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು
Updated on

ನವದೆಹಲಿ: ಹೊಸ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ತಿಳಿಸಿದ್ದಾರೆ.

ಮುಂದಿನ ತಿಂಗಳು ಬಿಡುಗಡೆಯಾಗಲಿರುವ ನೂತನ ವಿಮಾನಯಾನ ನೀತಿಯ ಕೆಲಸವನ್ನು ನಾವು ಈಗ ಮಾಡುತ್ತಿದ್ದೇವೆ. ಕರಡು ನೀತಿಯ ಬಗ್ಗೆ ಅನೇಕ ಸಲಹೆಗಳನ್ನು ನಾವು ಪಡೆದಿದ್ದೇವೆ. ಮುಂದಿನ ತಿಂಗಳು ಜಾರಿಗೆ ಬರುವ ನಿರೀಕ್ಷೆಯಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ದೇಶಕ್ಕೆ 4 ಅತ್ಯಾಧುನಿಕ ವಿಮಾನ ನಿಲ್ದಾಣಗಳ ಅವಶ್ಯಕತೆಯಿದೆ. ಎರಡು ಪಶ್ಚಿಮ ಕರಾವಳಿಯಲ್ಲಿ ಮತ್ತು ಇನ್ನೆರಡು ಪೂರ್ವ ಕರಾವಳಿಯಲ್ಲಿ. ಪ್ರಸ್ತುತ ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಸಮಾನಾಂತರವಾಗಿ ಮೂರು ಅತ್ಯಾಧುನಿಕ ವಿಮಾನ ನಿಲ್ದಾಣಗಳಿವೆ. ನಾಲ್ಕನೆಯದ್ದು ವಿಶಾಖಪಟ್ಟಣಂನಲ್ಲಿ ಬರಲಿದೆ. ಭಾರತದಂತಹ ದೇಶಗಳಿಗೆ ಹೋಲಿಸಿದರೆ ನಾಲ್ಕು ಅತ್ಯಾಧುನಿಕ ವಿಮಾನ ನಿಲ್ದಾಣಗಳ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಭೂಮಿಗಳು ಆಯಾ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಡುವುದರಿಂದ ಹೊಸ ವಿಮಾನ ನಿಲ್ದಾಣಗಳನ್ನು ಆರಂಭಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಮುಂದೆ ಬಂದು ಜಾಗ ಒದಗಿಸಿದರೆ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಕುರಿತು ಪರಿಗಣಿಸಲಾಗುವುದು ಎಂದರು.
ರಾಜಮುಂದ್ರಿ ವಿಮಾನ ನಿಲ್ದಾಣವನ್ನು ವಿಸ್ತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಆ ಕೆಲಸ ಮುಕ್ತಾಯವಾಗಲಿದೆ. ವಿಜಯವಾಡ ಸಮೀಪವಿರುವ ಗನ್ನವರಂ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯ ಸರ್ಕಾರ ಅದಕ್ಕಾಗಿ 700 ಎಕರೆ ಭೂಮಿಯನ್ನು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com