ಅಂಬೇಡ್ಕರ್ ಗೆ ನೋಬೆಲ್ ಪ್ರಶಸ್ತಿ ನೀಡಬೇಕು: ರಾಮ್ ವಿಲಾಸ್ ಪಾಸ್ವಾನ್

ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್
ರಾಮ್ ವಿಲಾಸ್ ಪಾಸ್ವಾನ್
Updated on

ಮುಂಬೈ: ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.
ನೋಬೆಲ್ ಪ್ರಶಸ್ತಿಗೆ ಅರ್ಹರಾಗಿರುವ ಅಂಬೇಡ್ಕರ್ ಅವರಿಗೆ ಡಾ.ಮಾರ್ಟಿನ್ ಲೂಥರ್ ಕಿಂಗ್ ಹಾಗೂ ನೆಲ್ಸನ್ ಮಂಡೇಲಾ ಅವರಂತೆಯೇ ಪ್ರಶಸ್ತಿ ನೀಡಿ ಗೌರವಿಸಬೇಕು ಬಡವರು ಹಾಗೂ ನಿರ್ಲಕ್ಷ್ಯಕ್ಕೊಳಗಾದವರ ಅಭಿವೃದ್ಧಿಗೆ ಶ್ರಮಿಸಿದ್ದ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ಘೋಷಣೆಯಾಗುವವರೆಗೂ ಅವಿರತ ಪ್ರಯತ್ನ ನಡೆಸುವುದಾಗಿ ಪಾಸ್ವಾನ್ ಭರವಸೆ ನೀಡಿದ್ದಾರೆ.
ಎಲ್ ಜೆ ಪಿ ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡುವ ಅಗತ್ಯತೆ ಬಗ್ಗೆ ಜನಜಾಗೃತಿ ಮೂಡಿಸಲಿದ್ದಾರೆ, ಜನಾಂಗೀಯ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ್ದ  ಮಾರ್ಟಿನ್ ಲೂಥರ್ ಕಿಂಗ್ ಗೆ 1964 ರಲ್ಲಿ ನೆಲ್ಸನ್ ಮಂಡೇಲಾ ಅವರಿಗೆ 1993 ರಲ್ಲಿ ನೋಬೆಲ್ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com