ಮುಜಾಫರ್ ನಗರ: ವಿವಾದಿತ ಭೂಮಿಯಲ್ಲಿ ಗೋಡೆ ನಿರ್ಮಾಣ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಭೆಯಿಂದಾಗಿ ಮುಜಾಫರ್ ನಗರದ ಶುಕೇರ್ತಲ್ ಪ್ರದೇಶದಲ್ಲಿ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.
ವಿವಾದಿತ ಪ್ರದೇಶದಲ್ಲಿ ಗೋಡೆ ನಿರ್ಮಾಣ ಮಾಡುವ ಸಂಬಂಧ ನಿನ್ನೆ ಗಲಭೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಗೋಡೆ ನಿರ್ಮಾಣ ಮಾಡಲು ಸ್ಥಳೀಯರು ಆಕ್ಷೇಪ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಜಗಳ ಉಂಟಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿಡಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಉಮೇಶ್ ಮಿಶ್ರಾ ಹೇಳಿದ್ದಾರೆ.
Advertisement