ರೋಹಿತ್ ಮತ್ತು ವಿವಿಯಿಂದ ವಜಾಗೈದ ವಿದ್ಯಾರ್ಥಿಗಳು 13 ದಿನಗಳ ಕಾಲ ಪ್ರತಿಭಟನೆ ಮಾಡಿದ್ದ ಆ ಸ್ಥಳದ ಬಗ್ಗೆ ಶೇ. 95ರಷ್ಟು ವಿದ್ಯಾರ್ಥಿಗಳು ಭಾವನಾತ್ಮಕ ಸಂಬಂಧವನ್ನು ಹೊಂದಿದ್ದಾರೆ. ಆ ಸ್ಥಳದಲ್ಲಿ ವಿದ್ಯಾರ್ಥಿಗಳು ಸಿಮೆಂಟ್ ನಿಂದ ಪುಟ್ಟ ಸ್ಮಾರಕವೊಂದನ್ನು ನಿರ್ಮಿಸಿ, ಅಲ್ಲೊಂದು ಟೆಂಟ್ ಹಾಕಿದ್ದಾರೆ. ಇಂತಿರ್ಪ, ಯಾವುದೇ ಕಾರಣಕ್ಕೂ ಮೆಮುಲಾ ಸ್ಮಾರಕವನ್ನು ಧ್ವಂಸ ಮಾಡಲು ನಾವು ಅನುಮತಿಸುವುದಿಲ್ಲ ಎಂದು ಪ್ರಭಾಕರ್ ಹೇಳಿದ್ದಾರೆ.