ರೈಲು ಮೂಲಕ ಬರ ಪೀಡಿತ ಪ್ರದೇಶಗಳಿಗೆ ನೀರು: ಕೇಂದ್ರದ ನೆರವು ತಿರಸ್ಕರಿಸಿದ ಉತ್ತರ ಪ್ರದೇಶ ಸರ್ಕಾರ

ಉತ್ತರ ಪ್ರದೇಶದ ಬುಂದೇಖಂಡ್ ನ ಬರ ಪೀಡಿತ ಪ್ರದೇಶಗಳಿಗೆ ರೈಲಿನ ಮೂಲಕ ನೀರು ಪೂರೈಸುವ ಕೇಂದ್ರ ಸರ್ಕಾರದ ನೆರವನ್ನು ಉತ್ತರ ಪ್ರದೇಶ ಸರ್ಕಾರ ತಿರಸ್ಕರಿಸಿದೆ.
ರೈಲು ಮೂಲಕ ಬರ ಪೀಡಿತ ಪ್ರದೇಶಗಳಿಗೆ ನೀರು: ಕೇಂದ್ರದ ನೆರವು ತಿರಸ್ಕರಿಸಿದ ಉತ್ತರ ಪ್ರದೇಶ ಸರ್ಕಾರ
Updated on

ಲಖನೌ: ಉತ್ತರ ಪ್ರದೇಶದ ಬುಂದೇಲ್ ಖಂಡ್ ನ ಬರ ಪೀಡಿತ ಪ್ರದೇಶಗಳಿಗೆ ರೈಲಿನ ಮೂಲಕ ನೀರು ಪೂರೈಸುವ ಕೇಂದ್ರ ಸರ್ಕಾರದ ನೆರವನ್ನು ಉತ್ತರ ಪ್ರದೇಶ ಸರ್ಕಾರ ತಿರಸ್ಕರಿಸಿದೆ.

ಮಹಾರಾಷ್ಟ್ರದ ಲಾತೂರ್ ನಂತೆಯೇ ಬುಂದೇಲ್ ಖಂಡ್ ನ ಬರ ಪೀಡೀತ ಪ್ರದೇಶಗಳಿಗೂ ರೈಲು ಮೂಲಕ ನೀರು ಪೂರೈಸುವ ಪ್ರಸ್ತಾವನೆ ನೀಡಿತ್ತು ಕೇಂದ್ರ ರೈಲ್ವೆ ಇಲಾಖೆ. ಆದರೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಉತ್ತರ ಪ್ರದೇಶ, ಮರಾಠ್ ವಾಡಾದಲ್ಲಿ ಉಂಟಾದ ಪರಿಸ್ಥಿತಿ ಬುಂದೇಲ್ ಖಂಡ್ ನಲ್ಲಿ ಉಂಟಾಗಿಲ್ಲ. ಅಲ್ಲಿ ಕೇಂದ್ರದ ಮಧ್ಯಪ್ರವೇಶದ ಅಗತ್ಯವಿತ್ತು. ಆದರೆ ಇಲ್ಲಿ ಆ ಪರಿಸ್ಥಿತಿ ಇಲ್ಲವಾದ್ದರಿಂದ ಕೇಂದ್ರ ಸರ್ಕಾರದ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಹೇಳಿದೆ. ಬುಂದೇಲ್ ಖಂಡ್ ನಲ್ಲಿ ನೀರಿನ ಬೇಡಿಕೆಯನ್ನು ಪೂರೈಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com