ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಿಎಂಆರ್ ಹೈದ್ರಾಬಾದ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಸಲ್ಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ವಿಚಾರಣನೆ ನಡೆಸಿದ ಹೈದ್ರಾಬಾದ್ ನ್ಯಾಯಾಲಯವು ಮಲ್ಯರನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣ ಆದೇಶವನ್ನು ಕಾಯ್ದಿರಿಸಿತ್ತು. ಆದರೆ, ಮಲ್ಯ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಶಿಕ್ಷೆಯ ಜಾರಿಯನ್ನು ನ್ಯಾಯಾಲಯ ಮೇ 25ಕ್ಕೆ ಮುಂದೂಡಿದೆ.