ಇನ್ನು ಸ್ಥಳೀಯರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಮೆ ಮುಂದೆ ಧರಣಿ ನಡೆಸಿದರು. ಅಫ್ಜಲ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಖಿಲ ಭಾರತ ಲೀಂಗಾಯತ ವೀರಶೈವ ಮಹಾಸಭಾ, ಬಸವ ಜಯಂತಿ ಉತ್ಸವ ಸಮಿತಿ ಮತ್ತು ಬಸವ ಪ್ರತಿಷ್ಠಾನ ಸೇರಿದಂತೆ ಇತರೆ ಸಂಘಗಳು ಜಂಟಿಯಾಗಿ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ. ಪ್ರಕರಣ ಕುರಿತು ತನಿಖೆಯನ್ನು ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿವೆ.