ಇಸ್ಲಾಮಿಕ್ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಟ್ರಂಪ್ ನೀಡಿದ್ದ ಹೇಳಿಕೆಗೆ ಭಾರತದಲ್ಲಿ ಬೆಂಬಲಿಗರು ಹುಟ್ಟಿಕೊಂಡಿದ್ದಾರೆ. ಪ್ರಸ್ತುತ ಇಡೀ ವಿಶ್ವವೇ ಭಯೋತ್ಪಾದನೆಯಿಂದ ನರಳುತ್ತಿದೆ. ಇಸ್ಲಾಮಿಕ್ ಸಂಘಟನೆಗಳು ಬಾಂಬ್ ದಾಳಿಗಳನ್ನು ನಡೆಸುತ್ತಿದೆ. ಇದನ್ನು ತಡೆಗಟ್ಟಲು ಮನುಕುಲದ ಸಂರಕ್ಷಕನಿಂದ ಮಾತ್ರ ಸಾಧ್ಯ. ಟ್ರಂಪ್ ಮನುಕುಲದ ಸಂರಕ್ಷಕರಾಗಿದ್ದು, ಅವರಿಂದಲೇ ಈ ಕಾರ್ಯ ಸಾಧ್ಯ. ಹಾಗಾಗಿ, ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆದ್ದು ಬರಲಿ ಎಂದು ಯಾಗ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಹಿಂದೂ ಸೇನೆ ಕಾರ್ಯಕರ್ತ ವಿಷ್ಣು ಗುಪ್ತಾ ಹೇಳಿದ್ದಾರೆ.