ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು

ಸಂಸತ್ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಿಗ್ಗೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. 
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯವರಾದ ರಾಮ್ ದಯಾಲ್ ವರ್ಮಾ(39) ಆತ್ಮಹತ್ಯೆಗೆ ಶರಣಾದ ದುರ್ದೈವಿ. 
ಸಂಸತ್ತಿನ ಸಂಕೀರ್ಣದಲ್ಲಿರುವ ರೈಲ್ ಭವನ ಮತ್ತು ಮೀಡಿಯಾ ಪಾರ್ಕಿಂಗ್ ಸೆಂಟರ್ ನಲ್ಲಿ ಇದ್ದ ಮರವೊಂದರಲ್ಲಿ ಇಂದು ಬೆಳಿಗ್ಗೆ 7.15ರ ವೇಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಆತ್ಮಹತ್ಯೆಗೂ ಮುನ್ನ ವರ್ಮಾ ಡೆತ್ ನೋಟ್ ಬರೆದಿಟ್ಟಿದ್ದು, ಆತನ ಜೇಬಿನಲ್ಲಿ ಪತ್ತೆಯಾಗಿದೆ. ಮೃತನ ಸಂಬಂಧಿಕರಿಗೆ ಸುದ್ದಿ ಮುಟ್ಟಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com