ಕಾರು ಓವರ್​ಟೇಕ್ ಮಾಡಿದ್ದಕ್ಕೆ ಯುವಕನ ಹತ್ಯೆ: ತಪ್ಪೊಪ್ಪಿಕೊಂಡ ರಾಕಿ ಯಾದವ್

ಕಳೆದ ವಾರ ಗಯಾದಲ್ಲಿ ತನ್ನ ಎಸ್ ಯುವಿ ಕಾರು ಓವರ್​ಟೇಕ್ ಮಾಡಿದ ಯುವಕನನ್ನು ತಾನೇ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಜೆಡಿಯು...
ರಾಕಿ ಯಾದವ್
ರಾಕಿ ಯಾದವ್
ಗಯಾ: ಕಳೆದ ವಾರ ಗಯಾದಲ್ಲಿ ತನ್ನ ಎಸ್ ಯುವಿ ಕಾರು ಓವರ್​ಟೇಕ್ ಮಾಡಿದ ಯುವಕನನ್ನು ತಾನೇ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಜೆಡಿಯು ಎಂಎಲ್ ಸಿ ಮನೋರಮಾ ಪುತ್ರ ರಾಕಿ ಯಾದವ್ ತಪ್ಪೊಪ್ಪಿಕೊಂಡಿರುವುದಾಗಿ ಶನಿವಾರ ಪೊಲೀಸ್ ಮೂಲಗಳು ತಿಳಿಸಿವೆ,
ಪ್ರಕರಣದ ವಿಧಿವಿಜ್ಞಾನ ವರದಿಯಲ್ಲಿ ರಾಕಿ ಯಾದವ್ ಗನ್​ನಿಂದ ಹಾರಿದ ಬುಲೆಟ್​ನಿಂದ ಆದಿತ್ಯ ಸಚ್​ದೇವ್ ಸಾವು ಸಂಭವಿಸಿದೆ ಎಂಬುದು ಬಹಿರಂಗಗೊಂಡಿದ್ದು, ತಾನೇ ಗುಂಡು ಹಾರಿಸಿ ಸಚ್​ದೇವ್ ಕೊಲೆ ಮಾಡಿರುವುದಾಗಿ ರಾಕಿ ಯಾದವ್ ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ನಾನು ಯಾವುದೇ ರೀತಿಯ ಗುಂಡಿನ ದಾಳಿ ನಡೆಸಿಲ್ಲ ಎಂದು ಹೇಳುತ್ತಿದ್ದ ರಾಕಿ ಯಾದವ್ ಇಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ,
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗರಿಮಾ ಮಲ್ಲಿಕ್ ಅವರು, ಜೆಡಿಯು ನಾಯಕಿಯ ಪುತ್ರ ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಘಟನೆಯಲ್ಲಿ ಹಲವರ ಕೈವಾಡವಿದೆ. ತನಿಖೆಯ ನಂತರ ಎಲ್ಲವೂ ಸ್ಪಷ್ಟವಾಗಿ ತಿಳಿಯಲಿ ಎಂದು ಹೇಳಿದ್ದಾರೆ.
ವ್ಯಾಪಾರಿಯೊಬ್ಬರ ಪುತ್ರ ಆದಿತ್ಯ ಸಚ್​ದೇವ್ ಹಾಗೂ ಸ್ನೆಹಿತರನ್ನು ಒಳಗೊಂಡ ಸ್ವಿಪ್ಟ್ ಕಾರು ಶಾಸಕಿಯ ಪುತ್ರ ರಾಕಿಯ ಎಸ್​ಯುವಿ ಕಾರನ್ನು ಓವರ್ ಟೇಕ್ ಮಾಡಿದ ಹಿನ್ನೆಲೆಯಲ್ಲಿ ಉಭಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಆವೇಶಕ್ಕೆ ಒಳಗಾದ ರಾಕಿ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಆದಿತ್ಯಾಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com