ಕೋಟ್ಟಯಂ: ಯುಡಿಎಫ್ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿ ಸಾರ್ವಜನಿಕ ಚುನಾವಣಾ ಪ್ರಚಾರ ಕಾರ್ಯಗಳನ್ನು ಅಂತ್ಯಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸೀಟು ಕೂಡಾ ಗೆಲ್ಲುವುದಿಲ್ಲ ಎಂದಿದ್ದಾರೆ.
ಮೇ 16ಕ್ಕೆ ಕೇರಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮತದಾರರು ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಕ್ಕ ಉತ್ತರ ನೀಡಲಿದ್ದಾರೆ
ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ. ಬಿಜೆಪಿಯ ಒಡೆದು ಆಳುವ ನೀತಿಗೆ ಕೇರಳ ಸಮ್ಮತಿಸುವುದಿಲ್ಲ ಎಂದು ಕೋಟ್ಟಯಂ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಕೇರಳ ಸಿಎಂ ಚಾಂಡಿ ಹೇಳಿದ್ದಾರೆ.