ಎಲ್ಡಿಎಫ್
ಎಲ್ಡಿಎಫ್

ಕೇರಳದಲ್ಲಿ ಕೊಚ್ಚಿ ಹೋಯ್ತು ಯುಡಿಎಫ್, ಸ್ಪಷ್ಟ ಬಹುಮತದತ್ತ ಎಡರಂಗ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು...
Published on

ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಈ ಭಾರಿ ಎಲ್ಡಿಎಫ್ 91 ಸ್ಥಾನಗಳಲ್ಲಿ ಮುನ್ನಡೆ ಪಡೆದು ಅಧಿಕಾರ ರಚಿಸುವತ್ತ ದಾಪುಗಾಲು ಇಟ್ಟಿದೆ.

ಒಟ್ಟಾರೆ 140 ಸ್ಥಾನಗಳ ಪೈಕಿ ಎಡರಂಗ 91 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಸದ್ಯ ಅಧಿಕಾರದಲ್ಲಿದ್ದ ಯುಡಿಎಫ್ ಕೇವಲ 48 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಈ ಭಾರಿ ಎನ್​ಡಿಎ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಎಡರಂಗ ಪಕ್ಷದಿಂದ ಸ್ಪರ್ಧಿಸಿರುವ ಮಲಮಪುಜಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ವಿ ಅಚ್ಯುತಾನಂದನ್ 4056 ಮತಗಳಿಂದ ಮುನ್ನಡೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com