ಮಕಾಡೆ ಮಲಗಿರುವ ಕಾಂಗ್ರೆಸ್ ಗೆ ಮೇಜರ್ ಸರ್ಜರಿ ಬೇಕು: ದಿಗ್ವಿಜಯ್ ಸಿಂಗ್

ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮಕಾಡೆ ಮಲಗಿರುವ ಕಾಂಗ್ರೆಸ್‌ಗೆ ಬಹುದೊಡ್ಡ ಸರ್ಜರಿಯ ಅಗತ್ಯವಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ...
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Updated on

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ  ಮಕಾಡೆ ಮಲಗಿರುವ ಕಾಂಗ್ರೆಸ್‌ಗೆ ಬಹುದೊಡ್ಡ ಸರ್ಜರಿಯ ಅಗತ್ಯವಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕೇರಳದಲ್ಲಿ ಅಧಿಕಾರ ಕಳೆದುಕೊಳ್ಳುವ ಜತೆಗೆ ತಮಿಳುನಾಡಿನಲ್ಲಿ ಡಿಎಂಕೆ ಜತೆ ಮೈತ್ರಿ ಕೂಡ ಫಲ ನೀಡಿಲ್ಲ. ಹೀಗಾಗಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳು ಅಗತ್ಯ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಕ್ಷ ಸೋಲಿನ ಕಾರಣಗಳ ಕುರಿತು ಪರಿಶೀಲಿಸಲಿದ್ದು, ಜನ ಸೇವೆಯ ನಿಟ್ಟಿನಲ್ಲಿ ಹೆಚ್ಚಿನ ಚಟುವಟಿಕೆ ನಡೆಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಬಳಿಕವೂ ಎಐಸಿಸಿ ಕಾರ್ಯಕಾರಿ ಸಮಿತಿಯಲ್ಲಿ ಬದಲಾವಣೆ ನಡೆದಿಲ್ಲ. ಶೀಘ್ರ ಬದಲಾವಣೆ ಅಗತ್ಯವಿದೆ ಎಂದು ಹೇಳಿರುವ ಅವರು ಪ್ರಿಯಾಂಕ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಅವಶ್ಯಕತೆಯಿದೆ ಎಂದು ಅಭಿಪ್ರಾಯ ಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com