ಸೀತಾರಮ್ ಯೆಚೂರಿ
ಸೀತಾರಮ್ ಯೆಚೂರಿ

ಎರಡು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ: ಸೀತಾರಮ್ ಯೆಚೂರಿ

ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ನವದೆಹಲಿ: ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.
ದೇಶದಲ್ಲಿ ಕೇವಲ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆಯಾಗುತ್ತಿರುವುದು ಮಾತ್ರವಲ್ಲದೇ, ಜನರ ಮೇಲೆ ಆರ್ಥಿಕ ಹೊರೆಯನ್ನು ಹೊರಿಸಲಾಗಿದೆ ಎಂದು ಸಿಪಿಐಎಂ ನ ಪೀಪಲ್ಸ್ ಡೆಮಾಕ್ರೆಸಿ ಎಂಬ ಪತ್ರಿಕೆಯಲ್ಲಿ ಬರೆದಿರುವ ಲೇಖನದಲ್ಲಿ  ಸೀತಾರಾಮ್ ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
ಮೂರನೇ ವರ್ಷದ ಆಡಳಿತಕ್ಕೆ ನರೇಂದ್ರ ಮೋದಿ ಸರ್ಕಾರ ಕಾಲಿಡುತ್ತಿದ್ದು, ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟು ಮಾಡುವ ಪ್ರಯತ್ನಕ್ಕೆ ಪ್ರತಿರೋಧ ತೋರಬೇಕಿದೆ ಎಂದು ಸೀತಾರಾಮ್ ಯೆಚೂರಿ ಕರೆ ನೀಡಿದ್ದಾರೆ. "2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಕೋಮು ದೃವೀಕರಣ ನಡೆಯುತ್ತಿದೆ ಎಂದು ಯೆಚೂರಿ ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com