ಅರುಣಾಚಲ ಪ್ರದೇಶದಲ್ಲಿ ಕಣಿವೆಗೆ ವಾಹನ ಉರುಳಿ 17 ಜನರ ಸಾವು

ಅರುಣಾಚಲ ಪ್ರದೇಶದಲ್ಲಿ ಪ್ರಯಾಣಿಕ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ 17 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ...
ಪ್ರಪಾತಕ್ಕೆ ಉರುಳಿದ ವಾಹನ (ಪಿಟಿಐ ಚಿತ್ರ)
ಪ್ರಪಾತಕ್ಕೆ ಉರುಳಿದ ವಾಹನ (ಪಿಟಿಐ ಚಿತ್ರ)
Updated on

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಪ್ರಯಾಣಿಕ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ 17 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಅರುಣಾಚಲ ಪ್ರದೇಶದ  ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ  ಈ ದುರ್ಘಟನೆ ಸಂಭವಿಸಿದ್ದು, ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ರೂಪ ಕಲಕ್​ತಾಂಗ್ ರಸ್ತೆಯಲ್ಲಿ ತೆರಳುತ್ತಿದ್ದ ವಾಹನ  ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಕೆಸರಿನಿಂದ ಕೂಡಿದ್ದ ರಸ್ತೆಯಿಂದ ವಾಹನ ಕೆಳಗೆ ಜಾರಿ ಪ್ರಪಾತಕ್ಕೆ ಬಿದ್ದಿದೆ. ಘಟನೆಯಸ್ಸಿ 17 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ  ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅರುಣಾಲಪ್ರದೇಶದ ಇಂಧನ ಸಚಿವ ಟಿ.ಎನ್.ತಂಗಧೋಕ್ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ  ವೀಕ್ಷಿಸುತ್ತಿದ್ದಾರೆ.

ಅಲ್ಲದೆ ಖುದ್ದು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು, ಸರ್ಕಾರದಿಂದ ಅಗತ್ಯ ನೆರವು ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com