ನವದೆಹಲಿ: ಕೇರಳದಲ್ಲಿ ಎಲ್ಡಿಎಫ್ ಸರ್ಕಾರ ಅಧಿಕಾರಕ್ಕೇರಿದ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ- ಸಿಪಿಐ (ಎಂ) ನಡುವಿನ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿತ್ತು. ಈ ಕೃತ್ಯವನ್ನು ಖಂಡಿಸಿ ಬಿಜೆಪಿ, ಸಿಪಿಎಂ ಕೇಂದ್ರ ಕಚೇರಿಯಾದ ಎಕೆಜಿ ಭವನಕ್ಕೆ ಭಾನುವಾರ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರ್ಯಾಲಿಯಲ್ಲಿ ಸಂಘರ್ಷವೇರ್ಪಟ್ಟಿರುವ ಬಗ್ಗೆ ವರದಿಯಾಗಿದೆ.