ಕೊಚ್ಚಿ ನೌಕಾನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು; ತನಿಖೆಗೆ ಆದೇಶ

ಕರ್ತವ್ಯ ನಿರತದಲ್ಲಿದ್ದ ಯೋಧನೊಬ್ಬ ಕೇರಳದ ಕೊಚ್ಚಿ ನೌಕಾನೆಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ...
ನೌಕಾನೆಲೆ (ಸಂಗ್ರಹ ಚಿತ್ರ)
ನೌಕಾನೆಲೆ (ಸಂಗ್ರಹ ಚಿತ್ರ)
Updated on

ಕೊಚ್ಚಿ: ಕರ್ತವ್ಯ ನಿರತದಲ್ಲಿದ್ದ ಯೋಧನೊಬ್ಬ ಕೇರಳದ ಕೊಚ್ಚಿ ನೌಕಾನೆಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ.

ನಾಯಕ್ ಶಿವದಾಸನ್. ಕೆ (53) ಸಾವನ್ನಪ್ಪಿರುವ ಯೋಧ. ಕೊಚ್ಚಿಯ ನೌಕಾನೆಲೆಯಲ್ಲಿ ಕಳೆದ ರಾತ್ರಿ ಕಾರ್ಯನಿರ್ವಹಿಸುತ್ತಿದ್ದ ಶಿವದಾಸನ್ ಅವರು ಇಂದು ಬೆಳಿಗ್ಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಶಿವದಾಸನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು. ಸಾವು ಕುರಿತಂತೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನೌಕಾನೆಲೆಯ ಅಧಿಕಾರಿಗಳು ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಉದ್ದೇಶ ಪ್ರೇರಿತವಾಗಿ ಗುಂಡು ಹಾರಿಸಲಾಗಿದೆಯೋ ಎಂಬುದರ ಕುರಿತಂತೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಮೃತ ಯೋಧ ಮೂಲತಃ ಕೇರಳದ ತ್ರಿಸ್ಸೂರು ಜಿಲ್ಲೆಯವರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com