ಬರಬಂಕಿ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದಲ್ಲದೇ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಸ್ವಯಂ ಘೋಷಿತ ದೇವಮಾನವ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಹರೈ ಹಳ್ಳಿಯಲ್ಲಿರುವ ಆಶ್ರಮದಲ್ಲಿ ಸ್ವಯಂ ಘೋಷಿತ ದೇವಮಾನವ ರಾಮ್ ಶಂಕರ್ ತಿವಾರಿ ಅಲಿಯಾಸ್ ಪರಮಾನಂದ ಬಂಧಿತ ಆರೋಪಿ.
ಮಕ್ಕಳಿಲ್ಲದ ಅನೇಕ ಮಹಿಳೆಯರಿಗೆ ಮಕ್ಕಳು ಕರಣಿಸುವುದಾಗಿ ಹೇಳಿ ವಂಚಿಸಿ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದನು. ಅಷ್ಟೇ ಅಲ್ಲದೇ ಆ ದೃಶ್ಯವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದನು. ತಿವಾರಿ ಅನೇಕ ಮಹಿಳೆಯರನ್ನು ರೇಪ್ ಮಾಡಿದ್ದು, ಪ್ರತಿಯೊಂದನ್ನು ವಿಡಿಯೋ ಮಾಡಿದ್ದಾನೆ.
ತೀವಾರಿ ಲೈಂಗಿಕ ದೌರ್ಜನ್ಯದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.