13 ಸಂಖ್ಯೆ ಅಪಶಕುನವಂತೆ: ಕಾರು ಬಳಸಲು ಕೇರಳ ಸಚಿವರುಗಳ ಹಿಂದೇಟು

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿ, ವೈಚಾರಿಕತೆಯ ಹೆಸರಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳ ಸಚಿವರು, ...
ಸಿಎಂ ವಿಜಯನ್ ಪ್ರಮಾಣ ವಚನ ಸಮಾರಂಭ
ಸಿಎಂ ವಿಜಯನ್ ಪ್ರಮಾಣ ವಚನ ಸಮಾರಂಭ
Updated on

ತಿರುವನಂತಪುರ: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿ, ವೈಚಾರಿಕತೆಯ ಹೆಸರಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದ  ಕೇರಳ ಸಚಿವರು,  13ನೇ ನಂಬರ್‌ ಕಾರು ಬಳಸಲು ಹಿಂದೇಟು ಹಾಕುತ್ತಿದ್ದಾರೆ.

ಈಗ 13ನೇ ಸಂಖ್ಯೆ ಅಪಶುಕುನ ಎನ್ನುವ ಕಾರಣಕ್ಕಾಗಿ ಆ ಸಂಖ್ಯೆಯ ಕಾರು ಬಳಸಲು ಹಿಂಜರಿಯುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿಯ ಮುಖಂಡ ಕೆ. ಸುರೇಂದ್ರನ್‌, ಅಪಶಕುನ ಎನ್ನುವ ಕಾರಣಕ್ಕೆ ಕಾರು ಬಳಸದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ಸಚಿವ ಕೆ.ಟಿ. ಜಲೀಲ್‌ ಅವರ ಕಾರಿನ ಸಂಖ್ಯೆ 12. ಅಂತೆಯೇ ಮತ್ತೊಬ್ಬ ಸಚಿವ ಪಿ. ತಿಲೊತ್ತಮನ್‌ ಅವರ ಕಾರಿನ ಸಂಖ್ಯೆ 14. ಸಚಿವ ಸಂಪುಟದ ಕೊನೆಯ ಸಚಿವರ ಕಾರಿನ ಸಂಖ್ಯೆ 20. ಹಾಗಾದರೆ 13ನೇ ಸಂಖ್ಯೆಯಲ್ಲಿ ಏನು ದೋಷವಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸಿಪಿಐ  ಮತ್ತು ಸಿಪಿಎಂ ಸಚಿವರು 13ನೇ ಸಂಖ್ಯೆಯ ಕಾರನ್ನು ಯಾಕೆ ಹೊರಗಿಡುತ್ತಿದ್ದಾರೆ ಎಂದು ತಿಳಿಯುವ  ಹಕ್ಕು ಜನರಿಗೆ ಇದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರಾದ ಸೀತಾರಾಂ ಯೆಚೂರಿ ಮತ್ತು ಪ್ರಕಾಶ್ ಕಾರಟ್ ಅವರು ಸಮರ್ಪಕವಾಗಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿ.ಎಂ ಪಿ.ವಿಜಯನ್‌ ಅವರಿಗೆ ಧೈರ್ಯವಿದ್ದರೆ 13ನೇ ಸಂಖ್ಯೆ ಅಪಶಕುನ ಎಂದು ಜನರಿಗೆ ಹೇಳಲಿ ಎಂದೂ ಸುರೇಂದ್ರನ್‌ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com