ಸ್ಫೋಟಗೊಂಡ ಸ್ಥಳದಿಂದ ಮೃತದೇಹಗಳು ಪತ್ತೆಯಾಗುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಫ್ಯಾಕ್ಟರಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 304-A ಅಡಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ತನಿಖೆಗೆ ಆದೇಶಿಸಿದ್ದಾರೆ. ಕೈಗಾರಿಕಾ ಸಚಿವ ಸುಭಾಶ್ ದೇಸಾಯಿ ಅವರು ಒಂದು ವಾರ ಎಲ್ಲಾ ರಾಸಾಯನಿಕ ಫ್ಯಾಕ್ಟರಿಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ.