ರಾ ಮಾಜಿ ನೌಕರ ಆರ್ ಕೆ ಯಾದವ್ ಅವರು ವರ್ಮಾ ವಿರುದ್ಧ ದೂರು ದಾಖಲಿಸಿದ್ದರು. ತದ ನಂತರ ಯಾದವ್ ಅವರು ವರ್ಮಾಗೆ ಸಮನ್ಸ್ ಜಾರಿ ಮಾಡಿ ಎಂದು ಮನವಿ ಮಾಡಿದ್ದರು. ಯಾದವ್ ಅವರು 13 ಸಾಕ್ಷಿಗಳನ್ನು ಹಾಜರುಪಡಿಸಿದ್ದು, ವರ್ಮಾ ಅಕ್ರಮ ಆಸ್ತಿ ವ್ಯವಹಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ದೂರುದಾರರು ಬಲವಾದ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿತ್ತು.