ಆದರೆ ಆರೋಪವನ್ನು ತಳ್ಳಿ ಹಾಕಿರುವ ಸೂರ್ಯ ಮ್ಯಾನೇಜರ್, ಕಾರು ಚಲಾಯಿಸಿದ ಮಹಿಳೆ ಹಿರಿಯರಾಗಿದ್ದು, ಅವರೊಂದಿಗೆ ಸಭ್ಯವಾಗಿ ವರ್ತಿಸಿ ಎಂದು ಯುವಕರಿಗೆ ಸೂರ್ಯ ಬುದ್ಧಿ ಹೇಳಿದ್ದಾರೆ. ಅಲ್ಲದೇ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ತೆಗೆಯುವಂತೆ ಸೂಚಿಸಿ ಅಲ್ಲಿಂದ ತೆರಳಿದ್ದಾರೆ. ಅವರು ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.