ಖಾಸಗಿ ಸುದ್ದಿವಾಹಿನಿಯ ಮುಖ್ಯ ಸಂಪಾದಕರು ನಡೆಸಿದ್ದ ಈ ಕುಟುಕು ಕಾರ್ಯಾಚರಣೆಯ ಸಿಡಿಯನ್ನು, 9 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಪ್ರದರ್ಶಿಸಿದ್ದರು. ಅಲ್ಲದೆ ಹರೀಶ್ ರಾವತ್ ಅವರು ಬಂಡಾಯ ಶಾಸಕರ ಬೆಂಬಲ ಗಳಿಸಲು ಪತ್ರಕರ್ತನ ಜೊತೆಗೆ ಹಣಕಾಸು ವ್ಯವಹಾರ ನಡೆಸಿದ್ದನ್ನು ಸಿಡಿಯಲ್ಲಿ ತೋರಿಸಲಾಗಿತ್ತು. ಆದರೆ ಬಂಡಾಯ ಶಾಸಕರು ಬಹಿರಂಗಪಡಿಸಿದ ಕುಟುಕು ಕಾರ್ಯಾಚರಣೆಯ ವಿಡಿಯೋ ನಕಲಿ ಮತ್ತು ರಾಜಕೀಯ ಪಿತೂರಿ ಎಂದು ರಾವತ್ ಹೇಳಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.