ಭಾರತದಲ್ಲಿ ಆಫ್ರಿಕನ್ ವಿದ್ಯಾರ್ಥಿಗಳ ಮೇಲೆ ಹೆಚ್ಚುತ್ತಿರುವ ಹಲ್ಲೆ ವಿರುದ್ದ ಆಫ್ರಿಕನ್ ಅಸೋಸಿಯೇಶನ್ ಆಫ್ ಸ್ಟೂಡೆಂಟ್ಸ್ ಇನ್ ಇಂಡಿಯಾ(ಎಎಎಸ್ಐ) ನವದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಅಫ್ರಿಕನ್ ವಿದ್ಯಾರ್ಥಿಗಳ ನಿಯೋಗದೊಂದಿಗೆ ಸಭೆ ನಡೆಸಿದ ಸುಷ್ಮಾ ಸ್ವರಾಜ್, ಅವರಿಗೆ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದ್ದಾರೆ.