ತಾತ್ಕಾಲಿಕ ಹೆಚ್ಚುವರಿ ಅಧಿಕಾರಿಗಳಾದ ಪ್ರವೀಣ್ ಕುಮಾರ್ ಮತ್ತು ಪರ್ವೇಶ್ ಶರ್ಮಾ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ ಸ್ವಚ್ಛ ಭಾರತ ಅಭಿಯಾನದ ಪ್ರಾಜೆಕ್ಟ್ ಕೊ ಅರ್ಡಿನೇಟರ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಪರ್ವೇಶ್ ಶರ್ಮಾ ಯೋಜನೆಯ ಆಕೌಂಟ್ ಅಸಿಸ್ಟೆಂಟ್ ಕೆಲಸ ಮಾಡುತ್ತಿದ್ದರು. ಸ್ವಚ್ಛ ಭಾರತ ಅಭಿಯಾನದ ಹಣವನ್ನು ಇನ್ನು ಇಬ್ಬರು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ಕಮಲ್ ಮತ್ತು ಸುರೇಂದ್ರ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.