ಭೋಪಾಲ್ ಎನ್'ಕೌಂಟರ್: 2 ವಾರಗಳೊಗಾಗಿ ವರದಿ ಸಲ್ಲಿಸಿ ಎಟಿಎಸ್'ಗೆ ಮ.ಪ್ರ ಹೈಕೋರ್ಟ್ ಸೂಚನೆ

ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ...
ಭೋಪಾಲ್ ಎನ್'ಕೌಂಟರ್
ಭೋಪಾಲ್ ಎನ್'ಕೌಂಟರ್
Updated on

ಜಬಲ್ಪುರ: ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಬಂಧನಕ್ಕೊಳಗಾಗಿದ್ದ 8 ಸಿಮಿ ಉಗ್ರರು ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಕೆಲವರಿಗೆ ಜಾಮೀನು ದೊರೆತಿತ್ತು. ಈ ಬೆಳವಣಿಗೆಗಳ ಮಧ್ಯೆಯೇ ಆರೋಪಿಗಳನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು.

ಎನ್ ಕೌಂಟರ್ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಕೆಲವರ ಜಾಮೀನು ಅರ್ಜಿ ವಿಚಾರಣೆ ಇನ್ನೂ ಬಾಕಿ ಉಳಿದಿತ್ತು. ಹೀಗಾಗಿ ಎನ್ ಕೌಂಟರ್ ಕುರಿತಂತೆ ವಿವರಣಾತ್ಮಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪರ ವಕೀಲ ನಯೀಮ್ ಖಾನ್ ಅವರು ಹೇಳಿದ್ದಾರೆ.

ಇದರಂತೆ ಇಂದು ವಿಚಾರಣೆ ನಡೆಸಿರುವ ಮಧ್ಯಪ್ರದೇಶ ನ್ಯಾಯಾಲಯವು ಉಗ್ರ ನಿಗ್ರಹ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 2 ವಾರಗಳೊಳಗಾಗಿ ಎನ್ ಕೌಂಟರ್ ಕುರಿತಂತೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಹೇಳಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com