ಎನ್ ಕೌಂಟರ್ ಬಗ್ಗೆ ವಿವರವಾದ ವರದಿ ನೀಡುವಂತೆ ಮಧ್ಯ ಪ್ರದೇಶ ಹೈಕೋರ್ಟ್ ನಿನ್ನೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿತ್ತು. ಘಟನೆ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಹಿಂದೆ ಘೋಷಿಸಿದ್ದರು. ಇನ್ನೊಂದೆಡೆ ರಾಜ್ಯ ಗೃಹ ಸಚಿವ ಭೂಪೇಂದ್ರ ಸಿಂಗ್, ಎನ್ ಕೌಂಟರ್ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ ಎಂದು ಹೇಳಿದ್ದರು.