ಪ್ರೀತಿ ನಿರಾಕರಿಸಿದ ಯುವತಿಗೆ ಬಾಟಲಿಯಿಂದ ಇರಿದ ಯುವಕ

ಪ್ರೀತಿಯ ನಿವೇದನೆಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ಕುಪಿತಗೊಂಡ ಯುವಕನೊಬ್ಬ ಯುವತಿಯನ್ನು ಒಡೆದ ಬಾಟಲಿಯಿಂದ ಇರಿದಿರುವ ಘಟನೆಯೊಂದು ಕೊಯಮತ್ತೂರಿನ ಭಾರತಯಾರ್ ವಿಶ್ವವಿದ್ಯಾಲಯದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಯಮತ್ತೂರು: ಪ್ರೀತಿಯ ನಿವೇದನೆಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ಕುಪಿತಗೊಂಡ ಯುವಕನೊಬ್ಬ ಯುವತಿಯನ್ನು ಒಡೆದ ಬಾಟಲಿಯಿಂದ ಇರಿದಿರುವ ಘಟನೆಯೊಂದು ಕೊಯಮತ್ತೂರಿನ ಭಾರತಯಾರ್ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.

21 ವರ್ಷದ ಕನಕಲಕ್ಷ್ಮಿ ಎಂಬ ಯುವತಿಗೆ ವೆಂಬುರಾಜ್ ಎಂಬ ಯುವಕ ಪ್ರೀತಿಸುವಂತೆ ನಿವೇದನೆಯನ್ನು ಮಾಡಿಕೊಂಡಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿದ್ದಾಳೆ. ಅಲ್ಲದೆ, ದಾರಿ ಬಿಡುವಂತೆ ಹೇಳಿದ್ದಾಳೆ. ಇದರಂತೆ ಇಬ್ಬರ ನಡುವೆ ಮಾತಿಕ ಚಕಮಕಿ ನಡೆದಿದೆ.

ಎಷ್ಟು ಹೇಳಿದರೂ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಯ ನಡೆಗೆ ತೀವ್ರವಾಗಿ ಕೋಪಗೊಂಡಿರುವ ಯುವಕ ಕೈಯಲ್ಲಿದ ಬಾಟಲಿಯನ್ನು ಒಡೆದು ಯುವತಿಯ ಕುತ್ತಿಗೆಯನ್ನು ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವತಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿ ವೆಂಬುರಾಜ್ ನನ್ನು ಪೊಲೀಸರು ಇದೀಗ ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com