ಇಟ್ಟಿಗೆ ಭಟ್ಟಿಗಳನ್ನು ಮುಚ್ಚುವಂತೆ ಸೂಚಿಸಬೇಕು ಮತ್ತು ದೆಹಲಿ ಭದ್ರಾಪುರ ಕೈಗಾರಿಕಾ ಘಟಕದಿಂದ ಹಾರುಬೂದಿ ವಾತಾವರಣ ಸೇರುವುದಕ್ಕೆ ತಡೆ ಸೇರಿದಂತೆ ವಾಯ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪರಿಸರ ಸಚಿವಾಲಯ ದೆಹಲಿ ಸರ್ಕಾರಕ್ಕೆ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸಿಎಂ ದೆಹಲಿ ಸರ್ಕಾರ ಹೊಗೆ ದಟ್ಟಣೆಯನ್ನು ತಡೆಗಟ್ಟಲು ಕೆಲವೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯ, ಕೇಂದ್ರ ಸರ್ಕಾರ ಸಹ ಈ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.