ಭೋಪಾಲ್ ಜೈಲು ಮುರಿದು ಅಪರಾಧಿಗಳು ಹೊರಬಂದ ಹಿನ್ನೆಲೆಯಲ್ಲಿ ವಿದ್ಯುತ್ ಬೇಲಿ ಅಳವಡಿಸಲು ಅಧ್ಯಯನ ನಡೆಸಲು ಉನ್ನತ ಅಧಿಕಾರಿಗಳ ತಂಡ ಈಗಾಗಲೇ ಛತ್ತೀಸ್ ಗಢಕ್ಕೆ ತೆರಳಿದೆ. ನೆರೆ ರಾಜ್ಯದಲ್ಲಿ ವಿದ್ಯುತ್ ಬೇಲಿ ಅಳವಡಿಸಿದ್ದನ್ನು ಇಲ್ಲಿ ಕೂಡ ಹೇಗೆ ಅಳವಡಿಸುವುದು ಎಂಬ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಮಧ್ಯ ಪ್ರದೇಶ ಕಾರಾಗೃಹ ಮಹಾ ನಿರ್ದೇಶಕ ಸಂಜಯ್ ಚೌಧರಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.