ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿಷೇಧ ನಿರ್ಧಾರವನ್ನು ಮಾಧ್ಯಮ ಸಂಸ್ಥೆಗಳು, ಭಾರತೀಯ ಸಂಪಾದಕರ ಸಂಘ ಹಾಗೂ ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಕೇಂದ್ರ ಸರ್ಕಾರ ಮಾಧ್ಯಮ ಮತ್ತು ಭಾರತೀಯ ನಾಗರಿಕರ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಹಾಗೂ ಸರ್ಕಾರದ ಈ ನಿರ್ಧಾರ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ ಎಂದು ಸಂಪಾದಕರ ಸಂಘ ವಾಗ್ದಾಳಿ ನಡೆಸಿತ್ತು.