ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವಾನಿ ಹತ್ಯೆಯ ನಾಲ್ಕು ತಿಂಗಳ ಬಳಿಕವೂ ಕಾಶ್ಮೀರದಲ್ಲಿ ಪ್ರತಿಭಟನೆ ಮುಂದುವರೆದಿರುವ ಪರಿಣಾಮ, ಕಾಶ್ಮೀರದಲ್ಲಿ ಸತತ 4 ತಿಂಗಳಿನಿಂದ ಅಶಾಂತಿಯ ವಾತಾವರಣ ಮುಂದುವರೆದಿದೆ. ಕಾಶ್ಮೀರದಲ್ಲಿ ಪ್ರತಿಭಟನೆ, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಸುವಲ್ಲಿ ಪಾಕಿಸ್ತಾನದ ಪಾತ್ರವನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ಶೀಘ್ರವೇ ಬಯಲುಗೊಳಿಸಲಿದೆ.