ನವದೆಹಲಿ: ತೀವ್ರ ಹೃದಯಘಾತದಿಂದ ಹಿರಿಯ ಪತ್ರಕರ್ತ ಹಾಗೂ ಟಿವಿ ನಿರೂಪಕ ಗಿರೀಶ್ ನಿಕಂ (59) ನಿಧನರಾಗಿದ್ದಾರೆ.
ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಅವರು ತೀವ್ರ ಅಸ್ವಸ್ಥರಾದರು. ಕೂಡಲೇ ಗಿರೀಶ್ ನಿಕಂ ಅವರನ್ನು ರಾಮ್ ಮನೋಹರ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ಸ್ಟಾರ್ ಆಫ್ ಮೈಸೂರು ಪತ್ರಿಕೆ ಮೂಲಕ ವೃತ್ತಿ ಆರಂಭಿಸಿದ್ದರು. ಅನಂತರ ಬೆಂಗಳೂರಿಗೆ ಬಂದು ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ಸೇರಿದ್ದರು.
ಆಂಗ್ಲ ಮಾಧ್ಯಮ ಸಂಸ್ಥೆಗಳಾದ ಇಂಡಿಯಾ ಟುಡೆ, ಡೆಕ್ಕನ್ ಕ್ರಾನಿಕಲ್ , ನ್ಯೂಸ್ ಟುಡೆಯಲ್ಲೂ ಸೇವೆ ಸಲ್ಲಿಸಿದ್ದ ಅವರು ರಾಜ್ಯಸಭೆ ಟಿವಿಯಲ್ಲೂ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು.
ನಿಕಂ ಅವರ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಬುಧವಾರ (ನ.9) ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹಲವು ಗಣ್ಯರು ಮೃತರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
Advertisement