ಬಾಬಾ ರಾಮ್ದೇವ್
ದೇಶ
ರು. 500-1000 ನೋಟುಗಳ ಚಲಾವಣೆ ಬಂದ್; ಮೋದಿ ನಡೆ ಪ್ರಶಂಸಿಸಿದ ಬಾಬಾ ರಾಮ್ದೇವ್
ಕಪ್ಪುಹಣ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಗಟ್ಟು ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ನಿರ್ಧಾರ...
ಹರಿದ್ವಾರ್: ಕಪ್ಪುಹಣ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಗಟ್ಟು ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬಾಬಾ ರಾಮ್ ದೇವ್ ಮೋದಿ ಅವರನ್ನು ಹೊಗಳಿಸಿದ್ದಾರೆ.
500-1000 ರುಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯನ್ನು ನಿಲ್ಲಿಸುವ ಮೂಲಕ ಭ್ರಷ್ಟಾಚಾರ. ಕಪ್ಪುಹಣ ನಕಲಿ ನೋಟುಗಳ ಹಾವಳಿಯನ್ನು ತಡೆಯಲು ಮುಂದಾಗಿದ್ದು ನಿಜಕ್ಕೂ ಸ್ವಾಗತಾರ್ಹ ವಿಷಯ. ಪ್ರಾಮಾಣಿಕ, ದೇಶಾಭಿಮಾನಿ ಮೋದಿ ಅವನ್ನು ಪ್ರಶಂಸಿಸುತ್ತೇನೆ ಎಂದರು.
ಭ್ರಷ್ಟಾಚಾರ, ನಕಲಿ ನೋಟುಗಳ ಹಾವಳಿ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಇದೀ ಮೋದಿ ಅವರು ಕಠಿಣ ನಿರ್ಧಾರವನ್ನು ಕೈಗೊಂಡಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ