ಎಕನಾಮಿಕ್ ಟೈಮ್ಸ್ ಗೆ ನೀಡಿರುವ ಚುಟುಕು ಸಂದರ್ಶನದಲ್ಲಿ ಮಾತನಾಡಿರುವ ನಾರಾಯಣ ಮೂರ್ತಿ, ಭಯೋತ್ಪಾದನೆ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾದದ್ದು, ಯೋಗ್ಯ ಆರ್ಥಿಕ ಪ್ರಗತಿ ಸಾಧಿಸಬೇಕಾದರೆ ಇಂಥಹ ಕ್ರಮ ಅಗತ್ಯವಿದ್ದು ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.