45ನೇ ಸಂಸ್ಥಾಪನಾ ದಿನದ ಅಂಗವಾಗಿ ಭೋಜ್ ಪುರ ಜಿಲ್ಲೆಯ ಅರಾದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಪಂದ್ಯ ನೋಡಲು ಬಂದಿದ್ದ ಬಿಹಾರದ ಸಂದೇಶ್ ವಿಧಾನಸಭೆ ಕ್ಷೇತ್ರದ ಆರ್ಜೆಡಿ ಶಾಸಕ ಅರುಣ್ ಯಾದವ್ ಸುಮ್ಮನಿರದೇ 19 ವರ್ಷದ ಕುಸ್ತಿಪಟು ರಾಜ್ ಕುಮಾರ್ ಪಾಸ್ವಾನ್ ಎಂಬಾತನಿಗೆ ಹಾಗೆ ಮಾಡು, ಹೀಗೆ ಮಾಡು ಎಂದು ಒಂದಾದ ಮೇಲೆ ಒಂದು ಸಲಹೆ ನೀಡುತ್ತಿರುತ್ತಾರೆ. ಇದರಿಂದ ಸಹನೆ ಕಳೆದುಕೊಂಡ ರಾಜ್ ಕುಮಾರ್ ಅರುಣ್ ಯಾದವ್ ನನ್ನು ಎತ್ತಿಕೊಂಡು ಕೆಳಗೆ ಬಿಸಾಕಿದ್ದಾನೆ.