ನೋಟು ನಿಷೇಧದ ಹಿಂದೆ ಹಗರಣ: ತನಿಖೆ ನಡೆಸುವಂತೆ ಕಾಂಗ್ರೆಸ್ ಆಗ್ರಹ

ನೋಟು ನಿಷೇಧದ ಹಿಂದೆ ಹಗರಣವಿರುವುದಾಗಿ ಆರೋಪಗಳು ಕೇಳಿಬಂದಿದ್ದು ಈ ಬಗ್ಗೆ ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶನಿವಾರ...
ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿ
ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿ
Updated on
ನವದೆಹಲಿ: ನೋಟು ನಿಷೇಧದ ಹಿಂದೆ ಹಗರಣವಿರುವುದಾಗಿ ಆರೋಪಗಳು ಕೇಳಿಬಂದಿದ್ದು ಈ ಬಗ್ಗೆ ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿಯವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಸ್ತಾಪ ಮಾಡುವುದಕ್ಕೂ ಮುನ್ನವೇ ಈ ಬಗ್ಗೆ ಕಾಂಗ್ರೆಸ್ ಹೇಳಿತ್ತು. ನೋಟಿನ ಮೇಲೆ ನಿಷೇಧ ಹೇರುವುದಕ್ಕೂ ಮುನ್ನ ಈ ಬಗೆಗಿನ ಮಾಹಿತಿ ಬಿಜೆಪಿ ನಾಯಕರಿಗಿತ್ತು ಎಂಬುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. 
ಈ ಬಗ್ಗೆ ಪ್ರಶಾಂತ್ ಭೂಷಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ. ನೋಟಿನ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ಘೋಷಣೆ ಮಾಡುವುದಕ್ಕೂ ಕೇವಲ 1 ಗಂಟೆಗೂ ಮುನ್ನ ಪಶ್ಚಿಮ ಬಂಗಾಳದ ಬಿಜೆಪಿ ನಾಯಕರೊಬ್ಬರು ರು.3 ಕೋಟಿ ಹಣವನ್ನು ಬ್ಯಾಂಕಿನಲ್ಲಿ ಹಾಕಿದ್ದರು. ಈ ಬೆಳವಣಿಗೆಗಳನ್ನು ನೋಡಿದರೆ ಪ್ರಕಱಣ ಕುರಿತು ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ. 
ರು.2000 ಮುಖಬೆಲೆ ನೋಟಿನ್ನು ಜಾರಿ ಮಾಡುವ ಮುಖಾಂತರ ಕಪ್ಪುಹಣವನ್ನು ಮಟ್ಟಹಾಕಲು ಹೇಗೆ ಸಾಧ್ಯ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕಿದೆ. ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com