ರು.500 ಹಾಗೂ 1,000 ನೋಟುಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಕೇಂದ್ರ ಸರ್ಕಾರ ನಿರ್ಧಾರದ ಕುರಿತಂತೆ ಈ ಹಿಂದೆ ಕಿಡಿಕಾರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಹೆಸರಿನಲ್ಲಿ ಎನ್ ಡಿಎ ಸರ್ಕಾರ ದೊಡ್ಡ ಹಗರಣ ನಡೆಸಿದ್ದು, ಪ್ರಧಾನಿ ಮೋದಿ ಈ ನಿರ್ಧಾರವನ್ನು ಘೋಷಿಸುವುದಕ್ಕೂ ಮುನ್ನವೇ ಕಪ್ಪುಹಣ ಹೊಂದಿರುವ ತಮ್ಮ ಕೆಲವು ಆಪ್ತರಿಗೆ ಮಾಹಿತಿಯನ್ನು ನೀಡಿದ್ದರು, ಆದ್ದರಿಂದ ಕೇಂದ್ರ ಸರ್ಕಾರದ ನೋಟ್ ರದ್ದತಿಯಿಂದ ಉಂಟಾಗಬೇಕಿದ್ದ ಪರಿಣಾಮದಿಂದ ಭ್ರಷ್ಟರು, ಕಪ್ಪುಹಣ ಹೊಂದಿರುವವರು ತಪ್ಪಿಸಿಕೊಂಡಿದ್ದಾರೆಂದು ಆರೋಪಿಸಿದ್ದರು.