ಪಾಕಿಸ್ತಾನದ ಪರ ಬೇಹುಗಾರಿಕೆ: ಇಬ್ಬರ ಬಂಧನ

ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್'ದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್'ದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಸತ್ವಿಂದರ್ ಸಿಂಗ್ ಹಾಗೂ ದಾದು ಬಂಧಿತ ವ್ಯಕ್ತಿಗಳಾಗಿದ್ದಾರೆ. ಬಂಧಿತ ವ್ಯಕ್ತಿಗಳು ಅಂತರಾಷ್ಟ್ರೀಯ ಗಡಿ ಕಾಯುತ್ತಿದ್ದ ಭಾರತೀಯ ಸೇನೆಯ ಫೋಟೋಗಳನ್ನು ತೆಗೆದು, ಭದ್ರತೆ ಕುರಿತ ಸೂಕ್ಷ್ಮ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.
ವಿಚಾರಣೆ ವೇಳೆ ಇಬ್ಬರು ತಪ್ಪೊಪ್ಪಿಕೊಂಡಿದ್ದು, ಭಾರತೀಯ ಸೇನೆಯ ಕೇಂದ್ರಗಳು ಹಾಗೂ ಗಡಿಯಲ್ಲಿರುವ ಭದ್ರತೆ ಕುರಿತಂತೆ ಮಾಹಿತಿ ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದೆವು ಎಂದು ಇಬ್ಬರೂ ಒಪ್ಪಿಕೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com