ಇನ್ನು ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಚಿನ್ನಾಭರಣಗಳ ಮೇಲೆ ಹೂಡಿಕೆ ಮಾಡುತ್ತಿರುವ ಬಗ್ಗೆಯೂ ನಿಗಾ ವಹಿಸಲಾಗುತ್ತಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. " ಜನ್ ಧನ್ ಖಾತೆಗಳಲ್ಲಿ ಏಕಾಏಕಿ ಹಣ ತುಂಬುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ, ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಜನ್ ಧನ್ ಖಾತೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದನ್ನು ತಡೆಗಟ್ಟಲು ಸಂಬಂಧಿಸಿದ ಇಲಾಖೆ ಜನ್ ಧನ್ ಖಾತೆಗಳನ್ನು ಪರಿಶೀಲಿಸುತ್ತಿವೆ, ಇದರೊಂದಿಗೆ 67 ವಿದೇಶಿ ವಿನಿಮಯ ಡೀಲರ್ ಗಳ ಮೇಲೂ ಸಹ ಜಾರಿ ನಿರ್ದೇಶನಾಲಯ ಕಣ್ಣಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.