ಜಮ್ಮು: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, 7 ಪಾಕಿಸ್ತಾನ ಯೋಧರು ಹತ್ಯೆಯಾಗಿದ್ದಾರೆ ಎಂಬ ವರದಿಯಾಗಿದೆ.
ಕಳೆದ ರಾತ್ರಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಪಾಕಿಸ್ತಾನದ ಏಳು ಸೈನಿಕರು ಹತ್ಯೆಯಾಗಿದ್ದಾರೆ ಎಂದು ಖುದ್ದು ಪಾಕಿಸ್ತಾನ ಸೇನೆ ಆರೋಪಿಸಿದೆ.
ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದ್ದು ಇದೀಗ ಭಾರತದ ಗೂಬೆ ಕೂರಿಸಲು ಮುಂದಾಗಿದೆ. ಭಾರತ ಕದನ ವಿರಾಮ ಉಲ್ಲಂಘಿಸಿದೆ ಎಂದು ಹೇಳುತ್ತಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಪಾಕಿಸ್ತಾನ ಸೇನೆ ನಿರಂತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಇದರಲ್ಲಿ ಭಾರತದ 10 ಯೋಧರು ಹುತಾತ್ಮರಾಗಿದ್ದಾರೆ.
Advertisement