ಇಂಡೋ-ಮಯನ್ಮಾರ್-ಥಾಯ್ ಲ್ಯಾಂಡ್ ಫ್ರೆಂಡ್ ಶಿಪ್ ಕಾರ್ ರ್ಯಾಲಿ ಉದ್ಘಾಟನಾ ಸಮಾರಂಭದಲ್ಲಿ ಅಖಿಲೇಶ್ ಯಾದವ್ ಈ ಹೇಳಿಕೆ ನೀಡಿದ್ದು, ಕಪ್ಪುಹಣವನ್ನು ತಾವೂ ವಿರೋಧಿಸುವುದಾಗಿ ಹೇಳಿದ್ದಾರೆ. ಕಪ್ಪುಹಣವನ್ನು ಹೊರತೆಗೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ 500, 1000 ರೂ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವ ಕೆಲವೇ ದಿನಗಳ ನಂತರ ಅಖಿಲೇಶ್ ಯಾದವ್ ಈ ರೀತಿಯ ಹೇಳಿಕೆ ನೀಡಿದ್ದಾರೆ.