ಎಂಡೋಕ್ರಾನಿಕಲ್ ಪರೀಕ್ಷೆಗಳಿಗಾಗಿ ನವೆಂಬರ್ 7 ರಂದು ಸುಷ್ಮಾ ಸ್ವರಾಜ್ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. "ಸುಷ್ಮಾ ಅವರಿಗೆ ಡಯಾಬೆಟಿಸ್ ತೊಂದರೆ ಇದೆ ಆದುದರಿಂದ ಅವರ ಕಿಡ್ನಿಗೆ ತೊಂದರೆಯಾಗಿದೆ. ಅವರು ಈಗ ಡಯಾಲಿಸಿಸ್ ಗೆ ಒಳಗಾಗಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ" ಎಂದು ಎಐಐಎಂಎಸ್ ವೈದ್ಯರು ಹೇಳಿದ್ದಾರೆ. ಸುಷ್ಮಾ ಸ್ವರಾಜ್ ಅವರಿಗೆ ಕಿಡ್ನಿ ಅಗತ್ಯವಿದ್ದರೆ ತಮ್ಮ ಕಿಡ್ನಿಯನ್ನು ನೀಡಲು ಸಿದ್ಧ ಎಂದು ಹೇಳಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ಅಹ್ಮರ್ ಮುಸ್ತಿಖಾನ್, ಬಲೂಚಿಸ್ತಾನದ ಸ್ವಾತಂತ್ರ್ಯ ಹೋರಾಟದ ಪರವಾಗಿ ಭಾರತ ಮಧ್ಯಪ್ರವೇಶಿಸಿ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಬಲೂಚ್ ಸ್ವಾತಂತ್ರ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದ ಮೊದಲ ವ್ಯಕ್ತಿಯಾಗಿದ್ದಾರೆ.