ರೇವಾರಿ: ಮುಂದಿನ 15 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹರ್ಯಾಣದ ರೇವಾರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ನೀತಿಯಿಂದ ಕೆಲ ಸಮಯ ತೊಂದರೆ ಉಂಟಾಗುತ್ತದೆ. ಆದರೆ ಮುಂದಿನ 15 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಈ ಐತಿಹಾಸಿಕ ನಿರ್ಧಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ. ನೀವು ಮತ ಚಲಾಯಿಸಿರುವುದು ಕೇವಲ ಸರ್ಕಾರ ಬದಲಾಯಿಸಿಕೊಳ್ಳುವುದಕ್ಕಲ್ಲ, ವ್ಯವಸ್ಥೆ ಬದಲಾಯಿಸಿಕೊಳ್ಳಲು ಎಂದು ಅವರು ಹೇಳಿದ್ದಾರೆ.
Advertisement