ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ವೇಳೆ ಕಾಂಗ್ರೆಸ್ ನಾಯಕ, ಅಡ್ವೊಕೇಟ್ ಕಪಿಲ್ ಸಿಬಲ್ ಅವರು ಕೋರ್ಟ್ ನ್ನು ರಾಜಕೀಯ ವೇದಿಕೆಯಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಜಿ ಮುಕುಲ್ ರೋಹ್ಟಗಿ ಆರೋಪ ಮಾಡಿದ್ದಾರೆ. ಕಪಿಲ್ ಸಿಬಲ್ ಅವರು ನೋಟುಗಳ ನಿಷೇಧದ ವಿಚಾರದಲ್ಲಿ ಅವರ ಪಕ್ಷವನ್ನು ಪ್ರತಿನಿಧಿಸಿ ಮಾತನಾಡುತ್ತಿದ್ದ ರೀತಿಯಲ್ಲೇ ಕೋರ್ಟ್ ನಲ್ಲೂ ವಾದ ಮಂಡಿಸಿತ್ತಿದ್ದಾರೆ ಎಂಬ ಅಟಾರ್ನಿ ಜನರಲ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಪಿಲ್ ಸಿಬಲ್, ಸರ್ಕಾರದ ನೀತಿಗಳನ್ನು ಟೀಕಿಸುವ ವಾಕ್ ಸ್ವಾತಂತ್ರ್ಯ ನನಗಿದೆ, ನಾನು ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದೇನೆಯೇ ಹೊರತು ರಾಜಕೀಯವನ್ನಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ವಾದವನ್ನು ಆಲಿಸಿದ ಕೋರ್ಟ್, ಕೇಂದ್ರ ಸರ್ಕಾರ ನೋಟುಗಳ ನಿಷೇಧದ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬುದಕ್ಕೆ ಸೂಕ್ತ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದು ನ.25ಕ್ಕೆ ವಿಚಾರಣೆಯನ್ನು ಮುಂದೂಡಿದೆ.